ಪ್ರತಿಯೊಬ್ಬರ ಬದುಕಿನಲ್ಲಿ ಮಹಿಳೆಯರ ಪಾತ್ರ ಅತ್ಯಂತ ದೊಡ್ಡದು. ಆಕೆಗಿರುವ ಸ್ಥೈರ್ಯ, ಧೈರ್ಯಕ್ಕೆ ಸರಿಸಾಟಿಯಿಲ್ಲ.ನಿಮ್ಮ ಬದುಕಿನಲ್ಲಿ ಆಕೆಯ ಮಾತ್ರ ಮಹತ್ವವಾಗಿರುತ್ತದೆ. ಆಕೆ ಗೃಹಿಣಿಯಾಗಿರಬಹುದು ಅಥವಾ ಹೊರಗಡೆ ದುಡಿಯುವ ಮಹಿಳೆಯಾಗಿರಬಹುದು, ಇಬ್ಬರಲ್ಲಿ ಯಾರು ಮೇಲಲ್ಲ, ಯಾರೂ ಕೀಳಲ್ಲ... ಇಬ್ಬರ ಪಾತ್ರಗಳು ನಿಮ್ಮ ಸಂಸಾರ ತೂಗಿಸಲು ಬಹುಮುಖ್ಯ. ಆಕೆ ನಿಮಗಾಗಿ ದುಡಿಯುತ್ತಾಳೆ, ಇಡೀ ಬದುಕನ್ನು ನಿಮಗಾಗಿ ಮೀಸಲಿಡುತ್ತಾಳೆ, ಆ ಹೆಣ್ಣಿಗೆ ಮಹಿಳಾ ದಿನಾಚರಣೆಯೆಂದು ಶುಭ ಕೋರಿದರೆ ಅವಳು ತುಂಬಾ ಖುಷಿಯಾಗುತ್ತಾಳೆ. ಇಲ್ಲಿ ನಾವು ನಿಮ್ಮಾಕೆಗೆ ಶುಭ ಕೋರಲು ಕೆಲವೊಂದು ಸಂದೇಶಗಳನ್ನು ನೀಡಿದ್ದೇವೆ.
ಡಿಸೆಂಬರ್ ಅಂದ ತಕ್ಷಣ ಎಲ್ಲರಿಗೂ ತಕ್ಷಣ ನೆನಪಿಗೆ ಬರುವುದು ಕ್ರಿಸ್ಮಸ್ ಆಚರಣೆ. ಇದು ಕ್ರಿಶ್ಚಿಯನ್ರ ಹಬ್ಬವಾದರೂ ಎಲ್ಲರೂ ಸಂತೋಷದಿಂದ ಈ ಆಚರಣೆಯಲ್ಲಿ ಭಾಗವಹಿಸುವುದು ಇದರ ವಿಶೇಷ. ಅದರಲ್ಲೂ ಸಂತಾ ಕ್ಲಾಸ್ ಬರುವುದು, ಕೇಕ್, ವಿವಿಧ ಬಗೆಯ ಭಕ್ಷ್ಯ, ಕ್ರಿಸ್ಮಸ್ ಟ್ರೀ, ವಿವಿಧ ಬಗೆಯ ಭಕ್ಷ್ಯ ಇವುಗಳಿಂದ ಕ್ರಿಸ್ಮಸ್ ತುಂಬಾ ವಿಶೇಷವಾಗಿರುತ್ತದೆ.
ನಾವಿಲ್ಲಿ ಕ್ರಿಸ್ಮಸ್ಗೆ ನಿಮ್ಮ ಪ್ರೀತಿ ಪಾತ್ರರಿಗೆ ಶುಭ ಕೋರಲು ಇಲ್ಲಿ ವಾಟ್ಸಾಪ್ ಹಾಗೂ ಸೋಷಿಯಲ್ ಮೀಡಿಯಾ ಸ್ಟೇಟಸ್ ಹಾಕಲು ಕೆಲವೊಂದು ಶುಭಾಶಯಗಳನ್ನು ನೀಡಿದ್ದೇವೆ ನೋಡಿ:
ಆದಿಕವಿ ಮಹರ್ಷಿ ವಾಲ್ಮೀಕಿ ಹಿಂದೂಗಳ ಧರ್ಮಗ್ರಂಥ ರಾಮಾಯಣ ಮಹಾಕಾವ್ಯದ ಕರ್ತೃ. ವಾಲ್ಮೀಕಿ ಮಹರ್ಷಿಗಳು ಬ್ರಹ್ಮನ ಅನುಗ್ರಹದಿಂದ ರಾಮಾಯಣವನ್ನು ರಚಿಸಿದರು ಎಂಬುದು ಭಾರತೀಯ ನಂಬಿಕೆ. ಇದು ಭಾರತದ ಮೊಟ್ಟ ಮೊದಲ ಮಹಾಕಾವ್ಯ ಎಂಬ ಹಿರಿಮೆಗೆ ಸಹ ಪಾತ್ರವಾದ ಕೃತಿ ಹಾಗೂ ಕರ್ತೃ ಮಹರ್ಷಿ ವಾಲ್ಮೀಕಿ.
ಅಕ್ಟೋಬರ್ 20ರಂದು ಮಹರ್ಷಿ ವಾಲ್ಮೀಕಿ ಅವರು ಜನಿಸಿದ ದಿನ, ಇಂದು ದೇಶಾದ್ಯಂತ ಅವರ ಜಯಂತಿಯನ್ನು ಆಚರಿಸಲಾಗುತ್ತದೆ. ವಿಶೇಷವಾಗಿ ಕರ್ನಾಟಕದಲ್ಲಿ ವಾಲ್ಮೀಕಿ ಜಯಂತಿಗೆ ವಿಶೇಷ ಗೌರವ ನೀಡಲಾಗಿದೆ. ಈ ಹಿನ್ನೆಲೆ ಮಹಾನ್ ಋಷಿ ವಾಲ್ಮೀಕಿ ಅವರು ಹೇಳಿರುವ ಜೀವನಸಾರವುಳ್ಳ ಹೇಳಿಕೆಗಳನ್ನು ನಾವಿಲ್ಲಿ ದಾಖಲಿಸಿದ್ದೇವೆ:
ಸೆಪ್ಟೆಂಬರ್ 5 ಶಿಕ್ಷಕರ ದಿನ. 1962ರಿಂದಲೂ ಆಚರಿಸಿಕೊಂಡು ಬರುತ್ತಿರುವ ಈ ದಿನ ಭಾರತೀಯ ಶಿಕ್ಷಣ ವ್ಯವಸ್ಥೆಗೆ ಅಪ್ರತಿಮ ಕೊಡುಗೆ ನೀಡಿದ ಶಿಕ್ಷಕ, ದಾರ್ಶನಿಕ, ದೇಶದ ಮೊದಲ ರಾಷ್ಟ್ರಪತಿ ಡಾ. ಸರ್ವಪಲ್ಲಿ ರಾಧಾಕೃಷ್ಣನ್ ರವರ ಜನ್ಮದಿನವೂ ಹೌದು. "ಶಿಕ್ಷಕರು ಯಾವುದೇ ದೇಶದ ಅತ್ಯುತ್ತಮ ಮೆದುಳುಗಳಾಗಬೇಕು" ಎಂದು ಡಾ. ರಾಧಾಕೃಷ್ಣನ್ ಕರೆ ನೀಡಿದ್ದರು.
ಅತ್ಯುತ್ತಮ ಶಿಕ್ಷಕರಾಗಿದ್ದ ಸರ್ವಪಲ್ಲಿ ರಾಧಾಕೃಷ್ಣರವರ ಹುಟ್ಟುಹಬ್ಬದಂದು ವಿದ್ಯಾರ್ಥಿಗಳು ಬಂದು ನಿಮ್ಮ ಹುಟ್ಟು ಹಬ್ಬವನ್ನು ಅದ್ಧೂರಿಯಾಗಿ ಆಚರಿಸಲಿದ್ದೇವೆ ಎಂದಾಗ ಅವರು ನನ್ನ ಹುಟ್ಟುಹಬ್ಬವನ್ನು.
ಆಗಸ್ಟ್ 22ಕ್ಕೆ ಹಿಂದೂಗಳಿಗೆ ವಿನಾಯಕ ಚತುರ್ಥಿಯ ಸಂಭ್ರಮ. ಹಿಂದೂ ಧರ್ಮದಲ್ಲಿ ಎಲ್ಲಾ ಪೂಜೆಗಳಲ್ಲಿ ಗಣಪನ ಪೂಜೆ ಮಾಡಿಯೇ ಮಾಡುತ್ತಾರೆ. ವಿಘ್ನ ನಿವಾರಕನನ್ನು ಪೂಜಿಸಿದರೆ ಎಲ್ಲಾ ಕಾರ್ಯಗಳು ನಿರ್ವಿಘ್ನವಾಗಿ ನಡೆಯುತ್ತದೆ ಎಂಬ ಅಚಲ ನಂಬಿಕೆ ಭಕ್ತರದ್ದು.
ಗಣೇಶ ಚತುರ್ಥಿಯಂದು ಗಣಪನ ಮೂರ್ತಿಯನ್ನು ಪ್ರತಿಷ್ಠಾಪಿಸಿ, ಪೂಜೆಯನ್ನು ಮಾಡಿ, ಗಣಪನಿಗೆ ಇಷ್ಟವಾದ ಮೋದಕಗಳನ್ನು ನೈವೇದ್ಯ ವಾಗಿ ಇಟ್ಟು ನಂತರ ಮೂರು ದಿನಕ್ಕೆ ಅಥವಾ ಏಳು ದಿನಕ್ಕೆ ಹೀಗೆ ತಮ್ಮ ಅನುಕೂಲಕ್ಕೆ ತಕ್ಕಂತೆ ವಿಸರ್ಜನೆ ಮಾಡಲಾಗುವುದು.
ಇಲ್ಲಿ ನಾವು ಗಣೇಶ ಚತುರ್ಥಿಗೆ ನಿಮ್ಮ ಪ್ರೀತಿ ಪಾತ್ರರಿಗೆ ವಿಶ್ ಮಾಡಲು ಶುಭಾಶಯಗಳನ್ನು ನೀಡಿದ್ದೇವೆ ನೋಡಿ: