Breaking News: ಭೂ ಹಗರಣ: ಸಂಸದ ಸಂಜಯ್ ರಾವತ್ಗೆ ಇಡಿ ಸಮನ್ಸ್
ಉದ್ಧವ್ ಠಾಕ್ರೆ ನೇತೃತ್ವದ ಮಹಾರಾಷ್ಟ್ರ ವಿಕಾಸ್ ಅಘಾಡಿ ಸರ್ಕಾರದ ಬುಡ ಅಲ್ಲಾಡುತ್ತಿರುವ ವೇಳೆಯಲ್ಲಿ ಉದ್ಧವ್ ಜೊತೆ ನಿಂತಿರುವ ಸಂಸದ ಸಂಜಯ್ ರಾವತ್ಗೆ ಆಘಾತ ಎದುರಾಗಿದೆ. ಎಚ್ಡಿಐಎಲ್ ಪ್ರಕರಣದ ತನಿಖೆಗೆ ಸಂಬಂಧಿಸಿದಂತೆ ರಾಜ್ಯಸಭಾ ಸದಸ್ಯ ರಾವತ್ಗೆ ಸಮನ್ಸ್ ನೀಡಲಾಗಿದೆ. ರಾವತ್ಗೆ ಮಂಗಳವಾರ ಸಮನ್ಸ್ ನೀಡಲಾಗಿದೆ.
ಭೂ ಹಗರಣ ಪ್ರಕರಣದಲ್ಲಿ ಶಿವಸೇನೆ ಮುಖಂಡ ಸಂಜಯ್ ರಾವತ್ ಅವರಿಗೆ ಜಾರಿ ನಿರ್ದೇಶನಾಲಯ (ಇಡಿ) ಸಮನ್ಸ್ ಜಾರಿ ಮಾಡಿದೆ. ಮಂಗಳವಾರ ಏಜೆನ್ಸಿಯ ಮುಂಬೈ ಕಚೇರಿಗೆ ಬೆಳಗ್ಗೆ 11ಕ್ಕೆ ವಿಚಾರಣೆಗೆ ಹಾಜರಾಗುವಂತೆ ಸೂಚಿಸಲಾಗಿದೆ.